Working with the three tiers of the rural local self government

Joined June 2020
2,712 Photos and videos
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸೋಣ, ಮಕ್ಕಳನ್ನು ದುಡಿಮೆಗೆ ದೂಡದೆ ಉತ್ತಮ ಶಿಕ್ಷಣವನ್ನು ನೀಡಿ ಅವರ ಉಜ್ವಲ ಭವಿಷ್ಯಕ್ಕೆ ನೆರವಾಗೋಣ. ಬಾಲ ಕಾರ್ಮಿಕರು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ಮಾಹಿತಿ ನೀಡಿ. #RDPR #RuralDevelopment #worldchildlabourday #abolishchildlabour @eshwar_khandre
1
2
12
336
ಕಾಲಮಿತಿಯೊಳಗೆ ಗ್ರಾ.ಪಂ ಆಸ್ತಿ ತೆರಿಗೆ ಪಾವತಿಸಿ, ಶೇ. 5ರಷ್ಟು ರಿಯಾಯಿತಿ ಪಡೆಯಿರಿ. ಕೊನೆಯ ದಿನಾಂಕ: 30 ಜೂನ್ 2026. 2026–27 ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸಿ 5% ರಷ್ಟು ರಿಯಾಯಿತಿ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ. @eshwar_khandre
3
30
1,227
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವರಾದ ಶ್ರಿ @eshwar_khandre ರವರು ರಾಜ್ಯದ ಎಲ್ಲಾ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಪಂಚಾಯತಿಗಳು ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು, 1/4
3
1
13
923
ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಸಮೀರ್‌ ಶುಕ್ಲಾ ಮತ್ತು ಶ್ರೀ ರಂದೀಪ್.‌ ಡಿ, (ಪಂ.ರಾಜ್.)‌ ಪಂಚಾಯತ್‌ ರಾಜ್‌ ಆಯುಕ್ತರಾದ ಡಾ|| ಅರುಧಂತಿ ಚಂದ್ರಶೇಖರ್‌, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ. ಫೌಜಿಯಾ ತರನ್ನುಮ್, ನಿರ್ದೇಶಕರು ಇ- ಆಡಳಿತ 3/4
3
2
321
ಶ್ರೀ ರಾಹುಲ್‌ ರತ್ನಂ ಪಾಂಡೆ, ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ ಗೌಡ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 4/4 #RDPR #RuralDevelopment
1
1
169
ವಿಶ್ವ ಪರಿಸರ ದಿನದ ಅಂಗವಾಗಿ ರಾಜ್ಯದ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಗ್ರಾಮಸಭೆ ಹಾಗೂ ‘ತಾಯಿಯ ಹೆಸರಲ್ಲಿ ಒಂದು ವೃಕ್ಷ’ ಅಭಿಯಾನವನ್ನು ಆಯೋಜಿಸಿ, ಪರಿಸರ ಸಂರಕ್ಷಣೆ, ಹಸಿರು ಪರಿಸರದ ನಿರ್ಮಾಣ ಮತ್ತು ಮರಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಗ್ರಾ.ಪಂ ಆವರಣ, ಸಾರ್ವಜನಿಕ ಸ್ಥಳಗಳು,1/2 @eshwar_khandre
3
10
533
ರಸ್ತೆ ಬದಿಗಳು ಹಾಗೂ ಖಾಲಿ ಜಾಗಗಳಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿ ಅಭಿಯಾನದ ಯಶಸ್ಸಿಗೆ ಕೈಜೋಡಿಸಿದರು. #environmentalawareness 2/2
2
2
416
ವಿಶ್ವ ಪರಿಸರ ದಿನ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ವಿಲೇವಾರಿ ಮಾಡೋಣ. ನಮ್ಮ ಗ್ರಾಮ ಪಂಚಾಯತಿಗಳನ್ನು ಪ್ಲಾಸ್ಟಿಕ್‌ ಮುಕ್ತವಾಗಿಸುವ ಪ್ರತಿಜ್ಞೆ ಮಾಡೋಣ. ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಿ, ಸ್ವಚ್ಛ ಹಾಗೂ ಆರೋಗ್ಯಕರ ಭವಿಷ್ಯವನ್ನು ನಿರ್ಮಿಸೋಣ." #RDPR #WorldEnvironmentDay #plantmoretrees
2
8
29
911
ವಿಶ್ವ ಪರಿಸರ ದಿನದ ಅಂಗವಾಗಿ ಮನೆಗಳಲ್ಲಿ ತ್ಯಾಜ್ಯ ವಿಂಗಡಣೆ, ಏಕಬಳಕೆ ಪ್ಲಾಸ್ಟಿಕ್ ನಿಷೇಧ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮ ಪಂಚಾಯತಿಗಳಲ್ಲಿ ಒಂದು ದಿನದ ವಿಶೇಷ ಗ್ರಾಮ ಸಭೆ ಆಯೋಜಿಸುವುದು ಮತ್ತು ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನವನ್ನು ನಡೆಸುವುದು.
3
12
402
ರಾಜ್ಯದ ಪ್ರತಿ ಜಿಲ್ಲೆಯ ಮೂರು ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಒಂದು ದಿನದ “ಅರಿವು ಕೇಂದ್ರಗಳ ಅಭಿವೃದ್ಧಿ” ಕಾರ್ಯಾಗಾರವನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಶ್ರೀಮತಿ @readingkafka ರವರು ಉದ್ಘಾಟಿಸಿ, 1/4
2
2
21
822
ಕಾರ್ಯಾಗಾರದ ಅಂಗವಾಗಿ ಅರಿವು ಕೇಂದ್ರಗಳ ಮೇಲ್ವಿಚಾರಕರಿಗೆ ವಾಟ್ಸಾಪ್ ಚಾಟ್‌ಬಾಟ್ ಬಳಕೆಯ ಕುರಿತು Bharat Digital Fellows ಪ್ರತಿನಿಧಿಗಳು ಪ್ರಾಯೋಗಿಕ ತರಬೇತಿ ನೀಡಿದರು. ಚಾಟ್‌ಬಾಟ್‌ನ ಪರಿಣಾಮಕಾರಿ ಬಳಕೆ, ಮಾಹಿತಿ ವಿನಿಮಯ ಹಾಗೂ ಅರಿವು ಕೇಂದ್ರಗಳ ಕಾರ್ಯನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆಯ ಮಹತ್ವವನ್ನು ತಿಳಿಸಲಾಯಿತು. 3/4
1
7
340
ಈ ಸಂದರ್ಭದಲ್ಲಿ ಆಯುಕ್ತಾಲಯದ ನಿರ್ದೇಶಕರಾದ ಶ್ರೀ ಅಮರೇಶ್‌ ಆರ್‌, ಉಪ ನಿರ್ದೇಶಕರಾದ ಶ್ರೀ ಕೃಷ್ಣ ಕುಮಾರ್, ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನದ ಸಮಾಲೋಚಕರಾದ ಡಾ.ಸಿ.ಎಚ್.ವಸುಂಧರಾ ದೇವಿ ಹಾಗೂ ಪಂಚಾಯತ್ ರಾಜ್ ಆಯುಕ್ತಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 4/4
1
2
206
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ವ್ಯಾಪ್ತಿಯ ದೊಡ್ಡಜಾಲ ಗ್ರಾಮ ಪಂಚಾಯತಿಯಲ್ಲಿ 2026-27ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆ ಆಯೋಜಿಸಲಾಯಿತು. ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಲಾಗಿದ್ದು, ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲಾಯಿತು. 1/3
2
1
9
967
ಯಾವುದೇ ಅರ್ಹ ವ್ಯಕ್ತಿಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗದಂತೆ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದರು. ಸದರಿ ಸಭೆಯಲ್ಲಿ ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸ್ವಂತ ಸಂಪನ್ಮೂಲದಿಂದ ಲ್ಯಾಪ್‌ಟಾಪ್ 2/3
3
4
797
ವಿತರಣೆ ಮತ್ತು ವಿಶೇಷ ಚೇತನರಿಗೆ ಮಾಸಾಶನದ ಚೆಕ್‌ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಮಾಜಿ ಸದಸ್ಯರು, ಆಡಳಿತಾಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಅರಿವು ಕೇಂದ್ರದ ಮೇಲ್ವಿಚಾರಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. #RDPR #Grampanchayat #Gramasabha #karnataka 3/3
1
1
563
ಮೇ – 28 ವಿಶ್ವ ಮುಟ್ಟಿನ ನೈರ್ಮಲ್ಯ ದಿನ ಮುಟ್ಟಿನ ಕುರಿತು ಸಮಾಜದಲ್ಲಿರುವ ಮೌಢ್ಯವನ್ನು ನಿರ್ಮೂಲನೆಗೊಳಿಸಿ, ಋತುಚಕ್ರದ ವೇಳೆ ನೈರ್ಮಲ್ಯದ ಅಭ್ಯಾಸಗಳನ್ನು ಪಾಲಿಸೋಣ, ಪರಿಸರ ಸ್ನೇಹಿ ಮುಟ್ಟಿನ ಉತ್ಪನ್ನಗಳನ್ನು ಬಳಸೋಣ. #RDPR #World_Menstrual_Hygiene_Day #menstrualcare #MHDay2026 #PeriodFriendlyWorld
1
5
622
ಕೊಡಗು ಜಿಲ್ಲೆ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಮಹಿಳೆಯರ ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ಉದ್ದೇಶದಿಂದ ಗ್ರಾಮ ಪಂಚಾಯತಿಯ ನಿಧಿಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. #RDPR #ruraldevelopment #WomenEmpowerments
2
10
597
ಹಾವು ಕಡಿತ ಎಲ್ಲಿ, ಯಾವಾಗ ಬೇಕಾದರೂ ಸಂಭವಿಸಬಹುದು, ಆದರೆ ಸಕಾಲಿಕ ಆರೈಕೆಯು ಜೀವಗಳನ್ನು ಉಳಿಸಬಹುದು. ವಿಷ-ನಿರೋಧಕ ಔಷಧಿ ಮಾತ್ರವೇ ಹಾವುಕಡಿತಕ್ಕೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾವು ಕಡಿತ (Snakebite) ತಡೆಗಟ್ಟುವಿಕೆ ಹಾಗೂ ನಿಯಂತ್ರಣಕ್ಕಾಗಿ ಕ್ರಮಗಳನ್ನು ಕೈಗೊಳ್ಳುವುದು. 1/2
4
3
25
1,206
ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಮರ್ಪಕ ಬೀದಿ ದೀಪಗಳನ್ನು ಅಳವಡಿಸಿ, ಸಾರ್ವಜನಿಕರಲ್ಲಿ ಹಾವು ಕಡಿತದ ಬಗ್ಗೆ ಜಾಗೃತಿ ಮೂಡಿಸುವುದು. #RDPR #ruraldevelopment #SnakebiteAwareness #SnakeBiteEmergency #SnakeBiteCare #WildlifeAwareness 2/2
4
295