🗳️ ಮತದಾರರ ಪಟ್ಟಿಯಲ್ಲಿ ಹೆಸರುಗಳು ಬೇರೆ ವಾರ್ಡ್ಗಳಲ್ಲಿ ಇದ್ದರೆ ದೂರು ಸಲ್ಲಿಸಿ
ಬೆಂಗಳೂರು, ಮಾರ್ಚ್ 23:
ಮಾನ್ಯ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 05 ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆ–2026 ಸಂಬಂಧವಾಗಿ ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು 09.03.2026 ರಂದು ಪ್ರಕಟಿಸಲಾಗಿದೆ.
📍 ಈ ಕರಡು ಮತದಾರರ ಪಟ್ಟಿಯ ಪ್ರತಿಗಳು:
• ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ
• ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ
• ವಾರ್ಡ್ ಕಚೇರಿಗಳು
ಇವುಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತವೆ.
📝 ದೂರು / ಆಕ್ಷೇಪಣೆ ಸಲ್ಲಿಸುವ ಅವಧಿ:
➡️ 30.03.2026 ರವರೆಗೆ ವಿಸ್ತರಣೆ
📅 ಅಂತಿಮ ಮತದಾರರ ಪಟ್ಟಿ ಪ್ರಕಟಣೆ:
➡️ 06.04.2026 ರಿಂದ 18.04.2026ಕ್ಕೆ ಮುಂದೂಡಲಾಗಿದೆ
🌐 ಮತದಾರರು ತಮ್ಮ ಹೆಸರನ್ನು ಕೆಳಗಿನ ಲಿಂಕ್ನಲ್ಲಿ ಪರಿಶೀಲಿಸಬಹುದು:
🔗 gba.karnataka.gov.in/elector…
ಅಲ್ಲಿ:
• Search by Name
• Search by EPIC
ಆಯ್ಕೆಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಬಹುದು.
⚠️ ಮತದಾರರು ತಮ್ಮ ಸಾಮಾನ್ಯ ನಿವಾಸ ಇರುವ ವಾರ್ಡ್ನಲ್ಲಿಯೇ ಮತದಾರರಾಗಿ ನೋಂದಾಯಿತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಒಂದು ವೇಳೆ ಹೆಸರು ಬೇರೆ ವಾರ್ಡ್ನಲ್ಲಿ ನಮೂದಾಗಿದ್ದರೆ, ಸಂಬಂಧಪಟ್ಟ
• ನಗರ ಪಾಲಿಕೆ ಕಚೇರಿ
• ಮತದಾರರ ನೋಂದಣಾಧಿಕಾರಿಗಳ ಕಚೇರಿ
• ವಾರ್ಡ್ ಕಚೇರಿ
ಇವುಗಳಲ್ಲಿ ದೂರು ಸಲ್ಲಿಸಬಹುದು.
ℹ️ ಹೆಚ್ಚಿನ ಮಾಹಿತಿಗಾಗಿ ಪತ್ರಿಕಾ ಪ್ರಕಟಣೆ ಪ್ರತಿಯನ್ನು ಲಗತ್ತಿಸಲಾಗಿದೆ.
#GreaterBengaluruAuthority#GBA#VoterList
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 05 ನಗರ ಪಾಲಿಕೆಗಳಿಗೆ ವಾರ್ಡುವಾರು ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿರುವಂತೆ ರಾಜ್ಯ ಚುನಾವಣಾ ಆಯೋಗದ ಪರಿಷ್ಕೃತ ಸುತ್ತೋಲೆಯಲ್ಲಿ ತಿಳಿಸಿರುವ ಸೂಚನೆಗಳ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಬಿಎ ಕೇಂದ್ರ ಕಛೇರಿಯ ಸಭಾಂಗಣ-1ರಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಚುಣಾವಣಾ ವಿಭಾಗದ ವಿಶೇಷ ಆಯುಕ್ತರಾದ ರಾಮಚಂದ್ರನ್, ವಿಶೇಷ ಕರ್ತವ್ಯಾಧಿಕಾರಿಯಾದ ಸೆಲ್ವಮಣಿ, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್, ಡಾ. ರಾಜೇಂದ್ರ ಕೆ.ವಿ, ಜಂಟಿ ಆಯುಕ್ತರಾದ ರಂಗನಾಥ್, ಸಹಾಯಕ ಆಯುಕ್ತರು, ರಾಜಕೀಯ ಪಕ್ಷದ ಪ್ರತಿನಿಧಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
#GreaterBengaluruAuthority#election2026#gbachiefcommissioner
ಬೆಂಗಳೂರಿನ ಎಲ್ಲಾ ಐದು ನಗರ ಪಾಲಿಕೆಗಳ ಚುನಾವಣೆಗಳ ಕರಡು ಮತದಾರರ ಪಟ್ಟಿ ಕುರಿತು ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿದರು.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ನಗರ ಪಾಲಿಕೆಗಳ ಆಯುಕ್ತರುಗಳಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಡಿ.ಎಸ್, ರಮೇಶ್ ಕೆ.ಎನ್, ಎಲ್ಲಾ ಕಂದಾಯ ವಿಭಾಗದ ಅಪರ ಆಯುಕ್ತರು, ಸಹಾಯಕ ಆಯುಕ್ತರಾದ ಎಂ. ಶ್ರೀನಿವಾಸ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
#GreaterBengaluruAuthority#gbaelections#gbachiefcommissioner#election2026
ನಗರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕಣೆ-2025 ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರ್ ರಾವ್ ರವರು ಜಿಬಿಎ ಕೇಂದ್ರ ಕಛೇರಿಯಲ್ಲಿ ಇಂದು ಸಭೆ ನಡೆಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಬೆಂಗಳೂರು ಜಿಲ್ಲೆಯಾದ್ಯಂತ ಒಟ್ಟು
8972 ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಬರುವ ದೂರುಗಳಿಗೆ ಶಿಘ್ರ ಸ್ಪಂದಿಸಬೇಕು. ರಾಜಕೀಯ ಪಕ್ಷಗಳು ಕೇಳುವ ಮಾಹಿತಿಯನ್ನು ಕೂಡಲೆ ನೀಡಬೇಕು. ಯಾವುದೇ ನ್ಯೂನ್ಯತೆಗಳಿಲ್ಲದಂತೆ ಪರಿಷ್ಕರಣೆ ಕಾರ್ಯವನ್ನು ನಡೆಸಲು
ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಸಹಾಯಕ ಆಯುಕ್ತರಾದ ಡಾ. ಬಿ ಶರಣಪ್ಪ, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
#greaterbengaluruauthority#gbachiefcommissioner
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 28 ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2025 ಕ್ಕೆ (Special Intensive Revision (SIR) of Electoral Roll) ಸಂಬಂಧಿಸಿದಂತೆ ಇಂದು 19-09-2025 ರಂದು ಮುಖ್ಯ ಚುನಾವಣಾಧಿಕಾರಿ ಕಛೇರಿ, ಶೇಷಾದ್ರಿ ರಸ್ತೆ,
EROs & AEROs ರವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀಮತಿ ಪ್ರೀತಿ ಗೆಹ್ಲೋಟ್, ನಗರ ಪಾಲಿಕೆಗಳ ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್, ಶ್ರೀ ರಮೇಶ್ ಕೆ.ಎನ್., ಅಭಿವೃದ್ಧಿ ಅಪರ ಆಯುಕ್ತರುಗಳಾದ ಶ್ರೀ ನವೀನ್ ಕುಮಾರ್ ರಾಜು, ಶ್ರೀ ದಿಗ್ವಿಜಯ್ ಬೋಡ್ಕೆ, ಲೋಖಂಡೆ ಸ್ನೇಹಲ್ ಸುಧಾಕರ್,
ಬೆಂಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ನೋಂದಾಯಿತ ಮಾನ್ಯತೆ ಪಡೆಯದ ಈ ಕೆಳಕಂಡ 10 ರಾಜಕೀಯ ಪಕ್ಷಗಳ ಪ್ರಾಥಮಿಕ ಪಟ್ಟಿಯು ಈ ಕೆಳಕಂಡಂತಿರುತ್ತದೆ. ಈ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿರ್ದೇಶನದಂತೆ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರು ಪಕ್ಷದ ಪ್ರಸ್ತುತ ಹಾಲಿ ವಿಳಾಸ ತಿಳಿದು ಬಂದಿರುವುರಿಲ್ಲ
ಮತ್ತು ಸದರಿ ಪಕ್ಷಗಳು 2019 ರಿಂದ ಕಳೆದ 6 ವರ್ಷಗಳ ಅವಧಿಯಲ್ಲಿ ಒಂದೇ ಒಂದು ಲೋಕಸಭೆ / ರಾಜ್ಯಸಭೆ ಚುನಾವಣೆ ಅಥವಾ ರಾಜ್ಯದ ವಿಧಾನಸಭೆ ಅಥವಾ ವಿಧಾನಸಭೆ ಉಪ ಚುನಾವಣೆಗಳಲ್ಲಿ ಸ್ಪರ್ಧಿಸಿರುವುದಿಲ್ಲ ಎಂಬುದನ್ನು ಪ್ರಸ್ತಾಪಿಸುತ್ತಾ, ಸಂವಿಧಾನದ 324ರ ಅನುಚ್ಛೇದದ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ,
ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ರಡಿ ಏಕೆ ಇಂತಹ ಪಕ್ಷಗಳ ನೋಂದಣಿಯನ್ನು ರದ್ದು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಅನ್ನು ಸದರಿ ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳಿಗೆ ಜಾರಿಗೊಳಿಸಿರುತ್ತಾರೆ. ಸದರಿ ನೋಟೀಸ್ಗಳನ್ನು ಸಂಬಂಧಪಟ್ಟ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಜಾರಿಗೊಳಿಸಿರುತ್ತಾರೆ.
@ECISVEEP
ನೊಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ(RUPPs) ಕುರಿತು ಮಾನ್ಯ ಭಾರತ ಚುನಾವಣಾ ಆಯೋಗವು ನಡೆಸಿದ ವರ್ಚ್ಯುವಲ್ ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಚುನಾವಣಾಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಪಾಲ್ಗೊಂಡು ಅಗತ್ಯ ಮಾಹಿತಿ ನೀಡಿದರು.
ಅಪರ ಜಿಲ್ಲಾ ಚುನಾಣಾಧಿಕಾರಿ(ಕೇಂದ್ರ)ಯಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಸಹಾಯ ಆಯುಕ್ತರಾದ ಶರಣಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
#bbmp#bbmpchiefcommissioner#DEO#election
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯ ವೇಳೆಯಲ್ಲಿ ಕಾನೂನು ನಿಬಂಧನೆಗಳು, ಸಾಂವಿಧಾನಿಕ ಆದೇಶಗಳು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಮುಖ್ಯ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಕಯಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳು ಹಾಗೂ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜ್ಯದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಭೆ
ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಜಗದೀಶ್, ಅವಿನಾಶ್ ಮೆನನ್ ರಾಜೇಂದ್ರನ್, ದಿಗ್ವಿಜಯ್ ಬೋಡ್ಕೆ, ಸ್ಮೇಹಲ್, ಸಹಾಯಕ ಆಯುಕ್ತರಾದ ಶರಣಪ್ಪ, ರಾಜಕೀಯ ಪಕ್ಷದ ಪ್ರತಿನಿಧಿಗಳು