ಕನ್ನಡಿಗ | ರೈತ | ವಕೀಲ | Congress | MLA - Nanjangudu

Joined September 2023
1,573 Photos and videos
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾಗಿದ್ದ ದಿ. ಶಾಮನೂರ್ ಶಿವಶಂಕರಪ್ಪ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. ಸಾರ್ವಜನಿಕ ಜೀವನದಲ್ಲಿ ಅವರು ನೀಡಿದ ಸೇವೆ, ಸಮಾಜದ ಅಭಿವೃದ್ಧಿಗೆ ಸಲ್ಲಿಸಿದ ಕೊಡುಗೆ ಹಾಗೂ ಜನಪರ ಚಿಂತನೆಗಳು ಸದಾ ಸ್ಮರಣೀಯವಾಗಿವೆ. #ShamanurShivashankarappa
6
89
ಇಂದು ನಂಜನಗೂಡು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಸಿ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು, ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ, ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಯನ್ನು ಆಲಿಸಿ, ತಕ್ಷಣ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಕ್ತ ಸೂಚನೆ ನೀಡಿದೆ. ಹಾಗೆ ಹಲವು ಸಭೆ ಮತ್ತು ಸಮಾರಂಭಗಳ ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿ, ಭಾಗವಹಿಸುವುದಾಗಿ ತಿಳಿಸಿದೆ. #JanathaDarshana #Nanjangudu #DarshanDhruvanarayana #MLANanjangudu
1
15
230
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಜನಪರ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಗೋಪಾಲಕೃಷ್ಣ ಅವರು ಇಂದು ನಂಜನಗೂಡು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡು, ತಮ್ಮ ಅನುಭವ ಮತ್ತು ಸೇವಾ ಮನೋಭಾವವನ್ನು ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಸಮರ್ಪಿಸಿ ಕಾರ್ಯನಿರ್ವಹಿಸುವಂತೆ ತಿಳಿಸಿ ಶುಭ ಹಾರೈಸಿದೆ.
1
25
1,690
ನಂಜನಗೂಡು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನಂಜನಗೂಡು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂತನವಾಗಿ ಆಯ್ಕೆಯಾದ ಕಾರ್ಮಿಕ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿ ಪದಾಧಿಕಾರಿಗಳಿಗೆ ನೇಮಕಾತಿ ಪತ್ರವನ್ನು ವಿತರಣೆ ಮಾಡಿದೆ. ಕಾರ್ಮಿಕರ ಹಕ್ಕುಗಳು, ಕಲ್ಯಾಣ ಮತ್ತು ಸಂಘಟನೆಯ ಬಲವರ್ಧನೆಗಾಗಿ ಅವರು ಸಮರ್ಪಿತವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ. ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ ರವರು, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ. ಎಂ ಶಂಕರ್ ರವರು, ಮೈಸೂರು ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ ರವರು, ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷರಾದ ಪ್ರವೀಣ್ ರವರು, ರಾಜ್ಯ ST ಘಟಕದ ಪ್ರಧಾನ ಕಾರ್ಯದರ್ಶಿ ದೊರೆಸ್ವಾಮಿ ರವರು, ಮಾಜಿ ತಾ. ಪಂ ಅಧ್ಯಕ್ಷರಾದ ನಾಗೇಶ್ ರಾಜ್ ರವರು, ಮುದ್ದುಮಾದ ಶೆಟ್ಟಿ ರವರು, ಚಂದನ್ ಗೌಡ ರವರು, ವಿಜಯ್ ರವರು, ಮಹೇಶ್ ರವರು, ಆದರ್ಶ್ ರವರು, ವಿಜಯ್ ಕುಮಾರ್ ರವರು, ಮಾದಪ್ಪ ರವರು, ತಾಲ್ಲೂಕು ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಹೆಡತಲೆ ರಾಜು ರವರು, ಶಿವಪ್ಪ ದೇವರು ರವರು, ದೇಬೂರು ಅಶೋಕ್ ರವರು, ಮುದ್ದುಮಾದ ಶೆಟ್ಟಿ ರವರು ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಮುಖಂಡರು, ಕಾರ್ಯಕರ್ತರು ಹಾಜರಿದ್ದರು. #CongressLabourWing #KarnatakaCongress #DarshanDhruvanarayana #MLANanjangudu
1
14
309
ನಂಜನಗೂಡು ತಾಲ್ಲೂಕಿನ ನೇರಳೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ರವರ 135 ನೇ ಜಯಂತಿ ಕಾರ್ಯಕ್ರಮ ಹಿನ್ನೆಲೆ ಭೇಟಿ ನೀಡಿ, ಬಾಬಾ ಸಾಹೇಬರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು ಅರ್ಪಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ದೇಶಕ್ಕೆ ನೀಡಿದ ಮಹಾನ್ ಚೇತನ ಡಾ. ಅಂಬೇಡ್ಕರ್ ಅವರ ಆದರ್ಶಗಳು ಸದಾ ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಿಳಿಸಿದೆ. ಅವರ ಚಿಂತನೆಗಳು ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದೆ ಈ ವೇಳೆ ಪೂಜ್ಯ ಬಂತೆ ಮಾತೆ ಗೌತಮಿ ಅವರು, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಮಾಜಿ ಮಹಾಪೌರರಾದ ಪುರುಷೋತ್ತಮ್ ರವರು, ಮಲ್ಕುಡಿ ಮಹದೇವಸ್ವಾಮಿ ರವರು, ಲತಾ ಸಿದ್ದಶೆಟ್ಟಿ ರವರು, ವೀರೇಂದ್ರ ರವರು, ಮೀನಾಕ್ಷಿ ರವರು, ಸೋಮಣ್ಣ ರವರು, ಮಂಜು ರವರು, ಸಿದ್ದನಾಯಕ ರವರು ಸೇರಿದಂತೆ ಹಲವು ಮುಖಂಡರು ಗ್ರಾಮಸ್ಥರು ಡಾ. ಬಿ. ಆರ್ ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು. #DrBRAmbedkarStatue #Nerale #DarshanDhruvanarayana #MLANanjangudu
2
18
166
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬಾಬಾ ಸಾಹೇಬರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು ಅರ್ಪಿಸಿದೆ. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ,ಡಾ. ಬಿ. ಆರ್ ಅಂಬೇಡ್ಕರ್ ಅವರ ಸಮಾನತೆ, ಸಾಮಾಜಿಕ ನ್ಯಾಯ ಮೌಲ್ಯಗಳನ್ನು ಸ್ಮರಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯತೆಯನ್ನು ತಿಳಿಸಿದೆ. ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಕುರಿಹುಂಡಿ ರಾಜು ರವರು, ಅಶೋಕ್ ರವರು, ಶ್ರೀಕಂಠಯ್ಯ ರವರು, ಜೈರಾಮ್ ರವರು, ಮಲ್ಲಿಕಾರ್ಜುನ ರವರು, ದೊರೆರಾಜ್ ರವರು, ಚಿನ್ನಸ್ವಾಮಿ ರವರು, ಮಹೇಶ್ ರವರು, ಆದರ್ಶ್ ರವರು ಸೇರಿದಂತೆ ಗ್ರಾಮಸ್ಥರು ಡಾ. ಬಿ. ಆರ್ ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಯುವಕರು ಹಾಜರಿದ್ದರು. #DrBRAmbedkarJayanti #Hullahalli #DarshanDhruvanarayana #MLANanjangudu
1
11
64
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂವಿಧಾನದ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರರಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ನಂತರ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ವೇದಿಕೆ ಕಾರ್ಯಕ್ರಮದಲ್ಲಿ ಪೂಜ್ಯ ಬಂತೆ ಮಾತೆ ಗೌತಮಿ ಅವರ ದಿವ್ಯಾಸಾನಿಧ್ಯ ಪಾಲ್ಗೊಂಡು, ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿ ಮಾತನಾಡಿ. ಸಮಾನತೆ, ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಸ್ವಾಭಿಮಾನದ ಕುರಿತಾದ ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ಕೋಟ್ಯಂತರ ಜನರಿಗೆ ಪ್ರೇರಣೆಯಾಗಿದ್ದು, ಅವರ ಚಿಂತನೆಗಳು ಸದಾ ಸಮಾಜಕ್ಕೆ ದಾರಿದೀಪವಾಗಿವೆ, ಬಾಬಾಸಾಹೇಬರು ಕಟ್ಟಿಕೊಟ್ಟ ಸಂವಿಧಾನದ ಮೌಲ್ಯಗಳನ್ನು ಕಾಪಾಡುತ್ತಾ, ಸಮಾನತೆ ಮತ್ತು ನ್ಯಾಯಯುತ ಸಮಾಜ ನಿರ್ಮಾಣದ ಸಂಕಲ್ಪವನ್ನು ಮತ್ತಷ್ಟು ಬಲಪಡಿಸೋಣ. ಮಾನ್ಯ ಮುಖ್ಯಮಂತ್ರಿಗಳು ಹೇಳುವಂತೆ, ದೇವರು ವರವನ್ನೂ ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ, ಅವಕಾಶವನ್ನು ಮಾತ್ರ ಕೊಡುತ್ತಾನೆ. ಅದೇ ರೀತಿ, ನೀವು ಜನದೇವತೆಗಳು ನನಗೆ ಸೇವೆ ಮಾಡುವ ಅಮೂಲ್ಯವಾದ ಅವಕಾಶವನ್ನು ನೀಡಿದೀರ. ನಿಮ್ಮ ವಿಶ್ವಾಸಕ್ಕೆ ಸದಾ ಚಿರಋಣಿಯಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದೆ. ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಮಾಜಿ ಮಹಾಪೌರರಾದ ಪುರುಷೋತ್ತಮ್ ರವರು, ಎಸ್. ಮಹದೇವಯ್ಯ ರವರು, ಮುಖ್ಯ ಭಾಷಣಕರರಾದ ದೀಪಕ್ ರವರು, ಚುಂಚನಹಳ್ಳಿ ಮಲ್ಲೇಶ್ ರವರು, ಮಲ್ಕುಡಿ ಮಹದೇವಸ್ವಾಮಿ ರವರು, ಮಲ್ಲಹಳ್ಳಿ ನಾರಾಯಣ ರವರು, ಮನಿಯಾಯ್ಯ ರವರು, ಪುಟ್ಟಸ್ವಾಮಿ ರವರು, ಜೈರಾಮ್ ರವರು, ಉಪ್ಪಿನಹಳ್ಳಿ ಶಿವಣ್ಣ ರವರು, ಗೋಪಾಲ್ ರವರು, ಕಳಲೆ ರಾಜೇಶ್ ರವರು, ತ್ರಿಣೇಶ್ ರವರು, PDO ಮಹೇಶ್ ರವರು, ಬಸವರಾಜ್ ರವರು, ಹಲ್ಲರೆ ಮಹದೇವಯ್ಯ ರವರು, ಪುಟ್ಟಸ್ವಾಮಿ ರವರು, ರೇವಣ್ಣ ರವರು, ಹಿರಣ್ಣ ರವರು, ಮಲ್ಲಯ್ಯ ರವರು, ಸುಕನ್ಯಾ ರವರು, ಬಿಂದುಶ್ರೀ ರವರು ಸೇರಿದಂತೆ ಡಾ. ಬಿ. ಆರ್ ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮುಖಂಡರು ಗ್ರಾಮಸ್ಥರು ಹಾಜರಿದ್ದರು. #DrBRAmbedkarStatue #AmbedkarJayanti #DarshanDhruvanarayana #Hallare
1
12
120
ಬೆಂಗಳೂರಿನ ವಿಕಾಸಸೌಧದಲ್ಲಿ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ @eshwar_khandre ಅವರನ್ನು ಭೇಟಿ ಮಾಡಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಶುಭ ಕೋರಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಕೆಪಿಸಿಸಿ ಕಾರ್ಯದರ್ಶಿಗಳಾದ ಕಾವೇರಪ್ಪ ರವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಸಿ . ಬಸವರಾಜ್ ರವರು, ಚಂದ್ರು ರವರು, ಕೃಷ್ಣ ರವರು ಉಪಸ್ಥಿತರಿದ್ದರು. #EshwarKhandre
1
20
746
ಆತ್ಮೀಯರು ಹಾಗೂ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಅರೋಗ್ಯ ಆಯಸ್ಸು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. @drbjvijaykumar
1
12
107
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದಂದು, ಮಕ್ಕಳ ಬಾಲ್ಯ, ಶಿಕ್ಷಣ ಮತ್ತು ಭವಿಷ್ಯವನ್ನು ಕಸಿದುಕೊಳ್ಳುವ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವ ಸಂಕಲ್ಪ ಮಾಡೋಣ. ಕಾನೂನು ಬಾಹಿರ ಹಾಗೂ ಮಕ್ಕಳ ಹಕ್ಕುಗಳಿಗೆ ವಿರುದ್ಧವಾದ ಈ ಅನಿಷ್ಠ ಪದ್ಧತಿಯನ್ನು ಯಾವುದೇ ರೂಪದಲ್ಲಿಯೂ ಬೆಂಬಲಿಸದೆ, ಅದರ ವಿರುದ್ಧ ಧ್ವನಿಯೆತ್ತಿ, ಸಮಾಜದಲ್ಲಿ ಜಾಗೃತಿ ಮೂಡಿಸುವ ಮೂಲಕ ಪ್ರತಿಯೊಂದು ಮಗುವಿಗೂ ಶಿಕ್ಷಣ, ರಕ್ಷಣೆ ಮತ್ತು ಗೌರವಯುತ ಬದುಕು ದೊರಕುವಂತೆ ಕೈಜೋಡಿಸೋಣ. #WorldDayAgainstChildLabour
2
9
88
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ @kharge ಸಾಹೇಬರು, @MansoorKhanINC ಹಾಗೂ @Pawankhera ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅನುಭವ, ಬದ್ಧತೆ ಮತ್ತು ಜನಸೇವೆಯ ಮನೋಭಾವ ದೇಶದ ಹಿತಾಸಕ್ತಿ ಕಾಪಾಡುವುದರ ಜೊತೆಗೆ ಕನ್ನಡಿಗರ ಆಶೋತ್ತರಗಳು ಹಾಗೂ ರಾಜ್ಯದ ಅಭಿವೃದ್ಧಿಯ ಪರವಾದ ಧ್ವನಿಯನ್ನು ಸಂಸತ್ತಿನಲ್ಲಿ ಇನ್ನಷ್ಟು ಪ್ರಬಲವಾಗಿ ಪ್ರತಿಧ್ವನಿಸುವಂತೆ ಮಾಡಲಿ ಎಂದು ಹಾರೈಸುತ್ತೇನೆ. #RajyaSabha #Congress #Karnataka #MallikarjunKharge #PawanKhera #MansoorAliKhan
1
21
252
ಕನ್ನಡ ಸಾಹಿತ್ಯದ ಬಂಡಾಯದ ಧ್ವನಿ, ಶೋಷಿತರ ನೋವು-ನಲಿವುಗಳಿಗೆ ಅಕ್ಷರ ರೂಪ ನೀಡಿದ ಮಹಾನ್ ಕವಿ, ಚಿಂತಕ ಹಾಗೂ ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕರಾದ ಡಾ. ಸಿದ್ದಲಿಂಗಯ್ಯ ಅವರ ಸಾಹಿತ್ಯ ಕೇವಲ ಬರಹವಾಗಿರದೆ, ಸಮಾಜ ಪರಿವರ್ತನೆಯ ಹೋರಾಟದ ಸಂಕೇತವಾಗಿತ್ತು. ಅವರ ಪುಣ್ಯಸ್ಮರಣೆಯಂದು ಆ ಮಹಾನ್ ಸಾಹಿತಿ, ಹೋರಾಟಗಾರರಿಗೆ ನನ್ನ ಗೌರವಪೂರ್ವಕ ನಮನಗಳು. #DrSiddalingaiah
3
22
164
ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷರಾದ ಎಸ್. ಆರ್ ಶ್ರೀನಿವಾಸ್ ಅವರೊಂದಿಗೆ ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗೆ ಮೈಸೂರಿನ ಐತಿಹಾಸಿಕ ಕೆ.ಆರ್. ಮಾರುಕಟ್ಟೆಗೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು ಹಾಗೂ ಮಾರುಕಟ್ಟೆಯ ಕಾರ್ಯನಿರ್ವಹಣೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದೆ. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ ರವರು, ಹುಣಸೂರು ಕ್ಷೇತ್ರದ ಶಾಸಕರಾದ ಹರೀಶ್ ಗೌಡ ರವರು, MLC ಶರವಣ ರವರು ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. #Mysuru #KRMarket
1
17
299
ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಹೊರಡಿಸಲಾದ ಅಧಿಸೂಚನೆಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಸಂಬಂಧಿತ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಮಿತಿ ಅಧ್ಯಕ್ಷರಾದ ಎಸ್. ಆರ್. ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸಮಗ್ರ ಚರ್ಚೆ ನಡೆಸಲಾಯಿತು. ಈ ವೇಳೆ ಸಮಿತಿಯ ಸರ್ವಸದಸ್ಯರು ಅಧಿಕಾರಿಗಳು ಹಾಜರಿದ್ದರು.
1
11
236
ಪ್ರಗತಿಪರ ಚಿಂತಕರು, ಖ್ಯಾತ ಸಾಹಿತಿಗಳು, ಕನ್ನಡ ಸಾಹಿತ್ಯ ಲೋಕದ ಅಪರೂಪದ ಪ್ರತಿಭೆ "ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಒಂದಲ್ಲಾ ಒಂದು ದಿನ ಫಲ ಕೊಟ್ಟೇ ಕೊಡುತ್ತದೆ" ಎಂಬ ಬದುಕಿನ ಮೌಲ್ಯವನ್ನು ಸಾರಿದ ದೇವನೂರು ಮಹಾದೇವ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ನೆಮ್ಮದಿ ಹಾಗೂ ಇನ್ನಷ್ಟು ಸಾಹಿತ್ಯಿಕ ಮತ್ತು ಸಾಮಾಜಿಕ ಸೇವೆ ಮಾಡುವ ಶಕ್ತಿಯನ್ನು ಕರುಣಿಸಲಿ ಎಂದು ಹಾರೈಸುತ್ತೇನೆ. #DevanuruMahadeva
2
24
236
ಪ್ರಗತಿಪರ ಚಿಂತಕ, ರಂಗಭೂಮಿ ತಜ್ಞ, ನಾಟಕಕಾರ, ಪ್ರಖರ ವಿಚಾರವಾದಿ, ಕನ್ನಡ ಸಾಹಿತ್ಯ ಮತ್ತು ರಂಗಭೂಮಿಗೆ ಅಪಾರ ಕೊಡುಗೆ ನೀಡಿದ ಖ್ಯಾತ ಲೇಖಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಕಾರ್ನಾಡ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. #GirishKarnad
2
19
280
ಬುಡಕಟ್ಟು ಜನಾಂಗದ ಅಸ್ಮಿತೆ, ಸಂಸ್ಕೃತಿ ಮತ್ತು ಹಕ್ಕುಗಳ ರಕ್ಷಣೆಗೆ ತಮ್ಮ ಬದುಕನ್ನೇ ಸಮರ್ಪಿಸಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಜಲ–ಅರಣ್ಯ–ಭೂಮಿಯ ಉಳಿವಿಗಾಗಿ ಹೋರಾಡಿದ ಜನನಾಯಕ ಬಿರ್ಸಾ ಮುಂಡ ಅವರ ಪುಣ್ಯಸ್ಮರಣೆಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.ಅವರ ಹೋರಾಟದ ಆದರ್ಶಗಳು ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಲಿದೆ. #BirsaMunda
2
13
203
ಜನತಾ ದರ್ಶನ – ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ #JanathaDarshana
1
23
407
ಜನತಾ ದರ್ಶನ – ನಂಜನಗೂಡು ತಾಲ್ಲೂಕಿನಾದ್ಯಂತ ಆಗಮಿಸಿದ ಜನಸಾಮಾನ್ಯರ ಸಮಸ್ಯೆ ಆಲಿಸಿದೆ. ಇಂದು ನಂಜನಗೂಡು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು, ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ, ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಯನ್ನು ಆಲಿಸಿ, ತಕ್ಷಣ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಕ್ತ ಸೂಚನೆ ನೀಡಿದೆ. ಹಾಗೆ ಹಲವು ಸಭೆ ಮತ್ತು ಸಮಾರಂಭಗಳ ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿ, ಭಾಗವಹಿಸುವುದಾಗಿ ತಿಳಿಸಿದೆ. #JanathaDarshana #Nanjangudu #DarshanDhruvanarayana #MLANanjangudu
2
2
24
446
ಎಐಸಿಸಿ ಕಾರ್ಯದರ್ಶಿಗಳು ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗಡೆ ಅವರ ನಿಧನದ ಸುದ್ದಿ ತಿಳಿದು ತೀವ್ರ ನೋವನ್ನುಂಟು ಮಾಡಿದೆ. ಪಕ್ಷದ ಸಂಘಟನೆ ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸುತ್ತಾ, ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಜನಸಾಮಾನ್ಯರ ನಡುವೆ ತಲುಪಿಸುವಲ್ಲಿ ಪಾತ್ರವಹಿಸುತ್ತಿದ್ದ ಅವರ ಅಕಾಲಿಕ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಮತ್ತು ಸದ್ಗತಿಯನ್ನು ಕರುಣಿಸಲಿ, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಬಂಧು-ಬಳಗಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. #SurajHegde
1
1
13
173